Pages

Tuesday, June 23, 2009

ಮಗನಿಗೊಂದು ಬುದ್ದಿಮಾತು

ಮನದ ಮಾತುಗಳು ಇರಲಿ ಮೌನದಲಿ.
ಗುರಿಯಿರದೆ ಚಿಂತನೆಗಳು ಕೃತಿಯಾಗದಿರಲಿ.
ಒಂದಾಗು ಎಲ್ಲರಲಿ, ಅತಿರೇಕವಿರದಿರಲಿ.
ಒರೆ ಹಚ್ಚಿ ನೋಡಲುಬೇಕು ,
ಗೆಳೆತನವ ಬೆಳೆಸುವ ಮುನ್ನ
ಹೃದಯ ಬಂಧಿಸಿರಬೇಕು ,
ಸ್ನೇಹ ಸಂಕೋಲೆಗಳಲಿ,ಬೇಕಿಲ್ಲ ಚಿನ್ನ.
ಸಿಕ್ಕಸಿಕ್ಕವರೆಲ್ಲ ಸ್ನೇಹಕಱರೇನಲ್ಲ ,
ಎಲ್ಲರನು ನೀನನಸುರಿಸಬೇಕಿಲ್ಲ.
ಬೇಡ ಕಾದಾಟ ಯಾರೊಡನೆಯೂ,
ಕಾದಿದರೆ ಅರಿಗಿರಲಿ ನಿನ್ನರಿವು ಕಾಳಗದಮುನ್ನ.
ಸಹನೆಯಲಿ ನೀ ಕೇಳು ಸರ್ವರ ನುಡಿಯ.
ನುಡಿದಾರೆ ನುಡಿ ಯೋಗ್ಯರಲಿ ಮುತ್ತಿನ ಹಾರ
ನಡತೆಯಲಿ ಸಿರಿತನವಿರಲಿ,
ಉಡುಗೆ ತೊಡುಗೆಗಳಿಗೂ ಉಂಟು ಬೆಲೆಯು,
ಲೆಕ್ಕದಾ ಅರಿವಿರಲಿ , ಅಳತೆ ಮೀರದೆ ಇರಲಿ.
ತರದು ಘನತೆಯ ಬರಿಯಬ್ಬರವು,
ಸಾಲದ ಹಂಗಿಲ್ಲದಿರಲಿ ,
ತರುವುದೇ ಬೇಡ,ಇನ್ನು ಕೊಡುವುದೇಕೆ?
ನೀನು ಸಾಲಿಗನಾದರೆ ಕಳೆಯಬಹುದು
ಕೆಳೆಯನನೂ ಸಾಲದ ಜೊತೆಗೆ
ಸಾಲದ ಹೊರೆ ನಿನಗಾದರೆ ,
ನಿನಗಿರದು ಆತ್ಮಗೌರವದ ರಕ್ಷೆ
ಎಲ್ಲಕ್ಕೂ ಮಿಗಿಲಾಗಿ ,
ಜೀವನವಿರಲಿ ಆತ್ಮಸಾಕ್ಷಿಗನುಗುಣವಾಗಿ
ಭಯವಿರದು ದೇವನಿಗೆ ಉತ್ತರಿಸಲು,
ಮನುಜರ ಲೆಕ್ಕವಿನ್ನೇನು..?
ಹೋಗಿ ಬಾ ಮಗು.. ಕಾಯಲಿ ನಿನ್ನನೀ ಹರಕೆಯು.

(Polonius advice to Laertes -- From Hamlet by William Shakespeare)

No comments:

Post a Comment